ಸನಾತನ ನಾಟ್ಯಾಟಲಯ ವತಿಯಿಂದ 22-7-2017 ರಂದು ಸನಾತನ ನಾಟ್ಯಾಲಯದ ಸಭಾಂಗಣದಲ್ಲಿ ಮಾತೃವಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂಸ್ಕಾರ ಭಾರತಿ ಜಿಲ್ಲಾ ಸಂಚಾಲಕರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವು ನೆರವೇರಿದ್ದು 2017 ರ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಭಾಗವಹಿಸಿದ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳು ತಾಯಿಯ ಪಾದ ಪೂಜೆ ಮಾಡಿದರು.